ಸೋನಿಯಾ ಗಾಂಧಿ ವಿರುದ್ಧದ ಎಫ್ಐಆರ್ ರದ್ದು ಮಾಡಿ : ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲು ಪಟ್ಟು ಹಿಡಿದ ಡಿಕೆಶಿ

ಕರ್ನಾಟಕದ ಶಿವಮೊಗದಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪಿಎಂ ಕೆಯರ್ ಫಂಡ್ ಕುರಿತು ಸೋನಿಯಾ ದುಷ್ಪ್ರಚಾರ ಮಾಡಿದ್ದಾರೆ ಎಂದು FIR ನಲ್ಲಿ ಆರೋಪಿಸಲಾಗಿದೆ.ಇನ್ನು ಈ ಬಗ್ಗೆ ಕಿಡಿ ಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗ  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ  ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ವಿರುದ್ಧ ದಾಖಲಿಸಿರುವ ಎಫ್ಐಆರ್ ವಾಪಸ್ ಪಡೆಯಬೇಕು ಹಾಗು ಪೊಲೀಸ್ ಅಧಿಕಾರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಶಿವಮೊಗ್ಗದ ಪ್ರವೀಣ್ ಕುಮಾರ್ ಎಂಬ ವಕೀಲ, ಪೊಲೀಸ್ ಅಧಿಕಾರಿಯೊಬ್ಬರ ಜೊತೆ ಸೇರಿ ಒಂದು ದೂರು ಕೊಟ್ಟು ಸೋನಿಯಾಗಾಂಧಿ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದಾರೆ, ಇದು ಸೂಕ್ಷ್ಮ ವಿಚಾರ. ಇಡೀ ದೇಶದಲ್ಲೇ ಸಂಚಲವನ್ನು ಉಂಟುಮಾಡುವ ವಿಚಾರವಾಗಿದೆ. ದ್ವೇಷದ ಮನೋಭಾವ, ಅಧಿಕಾರ ದುರುಪಯೋಗದಿಂದ ಇದು ನಡೆದಿದೆ ಎಂದು ಹರಿಹಾಯ್ದರು.

ಇನ್ನು ಕರ್ನಾಟಕದ ಶಿವಮೊಗದಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪಿಎಂ ಕೆಯರ್ ಫಂಡ್ ಕುರಿತು ಸೋನಿಯಾ ದುಷ್ಪ್ರಚಾರ ಮಾಡಿದ್ದಾರೆ ಎಂದು FIR ನಲ್ಲಿ ಆರೋಪಿಸಲಾಗಿದೆ.


Comments