ತಬ್ಲಿಘಿ ಜಮಾತ್ ನ ಬ್ಯಾಂಕ್ ಖಾತೆ ಮುಟ್ಟುಗೋಲು

ತಬ್ಲಿಘಿ ಜಮಾತ್ ಗೆ ಸಂಬಂಧಿಸಿದ್ದ ಬ್ಯಾಂಕ್ ಖಾತೆಗಳನ್ನು ತನಿಖಾ ಸಂಸ್ಥೆ  ಮುಟ್ಟುಗೋಲು ಹಾಕಿದೆ ಮತ್ತು ವಹಿವಾಟಿಗೆ ನಿರ್ಬಂಧ ವಿಧಿಸಲಾಗಿದೆ. ತನಿಖಾ ಸಂಸ್ಥೆಗಳ ಸೂಚನೆ ಮೇರೆಗೆ ಬ್ಯಾಂಕ್ ಗಳು ಈ ಕ್ರಮವನ್ನು ಜಾರಿಗೊಳಿಸಿದ್ದು ತಮ್ಲಿಘಿ ಜಮಾತ್ ಗೆ ಸಂಬಂಧಪಟ್ಟ ಖಾತೆದಾರರು ಯಾರೂ ಸಹ ಖಾತೆಯಿಂದ ವಹಿವಾಟು ನಡೆಸುವಂತಿಲ್ಲ. ಈ ಕ್ರಮವನ್ನು ತಬ್ಲಿಘಿ ಜಮಾತ್ ನ ಮೌಲಾನ ಸಾದ್ ನ ವಿರುದ್ಧ ಸಾಕ್ಷ್ಯ ಸಂಗ್ರಹ ಹಾಗೂ ಆತನನ್ನು ಬಂಧಿಸುವುದಕ್ಕಾಗಿ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.

ಕೊರೋನಾ ತಡೆಗೆ ಲಾಕ್ ಡೌನ್ ಘೋಷಣೆಯಾದ ಬಳಿಕವೂ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ದೆಹಲಿಯಲ್ಲಿ ತಬ್ಲಿಘಿ ಜಮಾತ್ ನ ಧಾರ್ಮಿಕ ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ ಭಾಗಿಯಾದವರು ದೇಶದ ವಿವಿಧ ಭಾಗಗಳಿಗೆ ತೆರಳಿದ್ದರು. ಈ ಬೆಳವಣಿಗೆ ಬಳಿಕ ಕೊರೋನಾ ಸೋಂಕು ಹೆಚ್ಚಿತ್ತು.


Comments